Header Ads Widget

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ

 

ಉಡುಪಿ: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗು ಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು.

ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ ಸ್ಪರ್ಧೆಗಳ ವಿವರಗಳನ್ನು ಈ ಕಚೇರಿಯಿಂದ ಪಡೆಯಬಹುದು. ಕಾರ್ಯಾಲಯ ಬೆಳಿಗ್ಗೆ 9ರಿಂದ ರಾತ್ರಿ 9ರ ವರೆಗೆ ಕಾರ್ಯಾಚರಿಸಲಿದೆ. ಮಾಹಿತಿ ಹಾಗೂ ವಿವರಗಳಿಗಾಗಿ  ಸುಮಿತ್ರಾ ಕೆರೆಮಠ 9035679905ನ್ನು ಸಂಪರ್ಕಿಸಬಹುದು.

ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಕೋಶಾಧಿಕಾರಿ ರಂಜನ್ ಕಲ್ಕೂರ, ಶ್ರೀಮಠದ ದಿವಾನ ನಾಗರಾಜ ಆಚಾರ್ಯ, ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಚೈತನ್ಯ  ಎಂ ಜಿ ., ರಾಜೇಶ್ ಭಟ್ ಪಣಿಯಾಡಿ, ಕಾರ್ಯದರ್ಶಿ ರಮೇಶ್ ಭಟ್ ,ರವೀಂದ್ರಾಚಾರ್ಯ, ಉಷಾ ಹೆಬ್ಬಾರ್, ಪೂರ್ಣಿಮಾ ಜನಾರ್ದನ್, ಸುಮನಾ ಆಚಾರ್ಯ, ಭಾರತಿ ಕೃಷ್ಣಮೂರ್ತಿ, ಅಮಿತ ಕ್ರಮಧಾರಿ, ರಘುಪತಿ ರಾವ್, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ, ಈಶ್ವರ ಶೆಟ್ಟಿ ಚಿಟ್ಪಾಡಿ, ರಾಮಚಂದ್ರ ಉಪಾಧ್ಯ, ಜಿ.ವಿ ಆಚಾರ್ಯ, ನಿರಂಜನ ಭಟ್ , ವಿವೇಕ್ ಪಾಂಗಣ್ಣಾಯ ಮತ್ತಿತರ  ಸಮಿತಿ ಸದಸ್ಯರು ಉಪಸ್ಥಿತರಿದ್ದರು.