ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ನವ ವಿವಾಹಿತೆಯೋರ್ವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಎಂದು ತಿಳಿದು ಬಂದಿದೆ.ಮಾ.1ರಂದು ಪೂಜಾಶ್ರೀ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿ ದ್ದರು.
ಪೂಜಾ ಮೂಲತಃ ಕಣಿಯೂರು ಗ್ರಾಮದ ನಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು, 10 ತಿಂಗಳ ಹಿಂದೆ ಇವರ ವಿವಾಹವಾಗಿತ್ತು. ಪೂಜಾ ಸಾವಿನ ಬಗ್ಗೆ ಸಂಶಯವಿದೆ ಎಂದು ಹೆತ್ತವರು ಆರೋಪಿಸಿದ್ದಾರೆ.
ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ