Header Ads Widget

ಬಪ್ಪನಾಡು ದೇವಸ್ಥಾನದಲ್ಲಿ ಉತ್ಸವ ಸಂದರ್ಭದಲ್ಲಿ ಮುರಿದು ಬಿದ್ದು ರಥ!

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ.


ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಮುರಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ದೇವರ ಉತ್ಸವ ಮುಂದುವರಿಸಲಾಯಿತು.