ಪೆರಣಂಕಿಲ ಭಕ್ತಿಸಿದ್ಧಾಂತೋತ್ಸವ - ರಾಮೋತ್ಸವ_ ಅನೇಕ ಸಾಧಕರಿಗೆ ಪುರಸ್ಕಾರ.
ಪೆರಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ಪೇಜಾವರ ಮಠ ಉಡುಪಿ , ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ , ಅಖಿಲ ಭಾರತ ಮಾಧ್ವ ಮಹಾಮಂಡಲಗಳ ಸಂ ಯುಕ್ತ ಆಶ್ರಯದಲ್ಲಿ ವೈಭವದಿಂದ ನೆರವೇರಿದ ಭಕ್ತಿ ಸಿದ್ಧಾಂತೋತ್ಸವ ಹಾಗೂ ರಾಮೋತ್ಸವದ ಧರ್ಮಸಭೆಯಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ನಿಯೋಜಿತರಾದ ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ವಿದ್ವಾನ್ ಡಾ ಎಲ್ ಸುಬ್ರಹ್ಮಣ್ಯಂ ಅವರಿಗೆ ಸಂಗೀತ ಕಲಾವಾರಿಧಿ ಬಿರುದಿನೊಂದಿಗೆ ಪ್ರಶಸ್ತಿ , ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿವಿ ಕುಲಪತಿ ಡಾ ಶ್ರೀನಿವಾಸ ವರಖೇಡಿ , ಪೂರ್ಣಪ್ರಜ್ಞ ಸಂಸೋಧನ ಕೇಂದ್ರದ ವಿಶ್ರಾಂತ ನಿರ್ದೇಶಕ ಡಾ ಆನಂದ ತೀರ್ಥ ನಾಗಸಂಪಿಗೆ , ತಿರುಮಲ ತಿರುಪತಿ ದಾಸ ಸಾಹಿತ್ಯ ಪ್ರಾಜೆಕ್ಟ್ ಮುಖ್ಯಸ್ಥ ಪಗಡಾಲ ಆನಂದ ತೀರ್ಥಾಚಾರ್ಯ, ಮಹಾಮಹೋಪಾಧ್ಯಾಯ ವಿದ್ವಾನ್ ಅದ್ಯಪಾಡಿ ಹರಿದಾಸ ಭಟ್ ಅವರಿಗೆ ಶ್ರೀ ವಿಶ್ವೇಶತೀರ್ಥಾನುಗ್ರಹ ಪ್ರಶಸ್ತಿ , ಹಾಗೂ ಡಾ ವ್ಯಾಸನಕೆರೆ ಪ್ರಭಂಜನಾಚಾರ್ಯರಿಗೆ ಶ್ರೀ ರಾಮವಿಠಲಾನುಗ್ರಹ ಪ್ರಶಸ್ತಿಯನ್ನಿತ್ತು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹಿಸಿದರು .
ಅದೇ ರೀತಿ ಹಿರಿಯ ಯಕ್ಷಗಾನ ಕಲಾವಿದ ಕೆ ಗೋವಿಂದ ಭಟ್ , ಉದ್ಯಮಿ , ಸಾಮಾಜಿಕ ಧುರೀಣರಾದ ಡಾ ಜಿ ಶಂಕರ್ , ಆದರ್ಶ ಆಸ್ಪತ್ರೆ ನಿರ್ದೇಶಕ ಡಾ ಜಿ ಎಸ್ ಚಂದ್ರ ಶೇಖರ್ , ಚಿತ್ರಕಲಾವಿದ ಪಿ ಎನ್ ಆಚಾರ್ಯಅವರಿಗೆ ರಾಮೋತ್ಸವ ಪುರಸ್ಕಾರ 2025 ,ಆಳ್ವಾಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ ಎಂ ಮೋಹನ ಆಳ್ವ , ಕಟೀಲು ದೇವಳದ ಆನುವಂಶಿಕ ಅರ್ಚಕರುಗಳಾದ ವಾಸುದೇವ ಆಸ್ರಣ್ಣ , ಹಿರಿಯ ಜ್ಯೋತಿಷಿ ಪಾವಂಜೆ ಕೃಷ್ಣ ಭಟ್ ,ಪಾಜಕ ಮಧ್ವ ಮಠದ ವ್ಯವಸ್ಥಾಪಕ ಮಾಧವ ಉಪಾಧ್ಯಾಯರು , ವಿಶ್ವ ಹಿಂದು ಪರಿಷತ್ ಮಾಜಿ ಪ್ರಾಂತ ಅಧ್ಯಕ್ಷ ಪ್ರೊ ಎಂ ಬಿ ಪುರಾಣಿಕ್ , ಮೂಡಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಳದ ಆನುವಂಶಿಕ ಅರ್ಚಕ ಆಡಳಿತ ಮೊಕ್ತೇಸರ ಈಶ್ವರ ಭಟ್ , ಕುಡುಪು ಅನಂತಪದ್ಮನಾಭ ದೇವಸ್ಥಾನದ ಆನುವಂಶಿಕ ಅರ್ಚಕ ಕುಡುಪು ನರಸಿಂಹ ಭಟ್ , ಪ್ರಸಿದ್ಧ ನಾಗಪಾತ್ರಿ ಸಗ್ರಿ ಗೋಪಾಲಕೃಷ್ಣ ಸಾಮಗ , ಗೋಡಂಬಿ ರಫ್ತು ಉದ್ಯಮಿ ಮೂಡಬಿದಿರೆ ಅನಂತ ಕೃಷ್ಣ ರಾವ್ , ಹುಲಿಕೋಲದ ದೈವ ನರ್ತಕ ಗುಡ್ಡ ಪಾಣಾರ , ಪುತ್ತೂರು ರಾಮಕುಂಜೇಶ್ವರ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಸೇಸಪ್ಪ ರೈ ಮತ್ಸ್ಯೋದ್ಯಮಿ ಸಾಧು ಸಾಲ್ಯಾನ್ , ಭೌತಶಾಸ್ತ್ರಜ್ಞ ಡಾ ಎ ಪಿ ಭಟ್ , ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಪ್ರೊ ಶಂಕರ್ ,ಪಾಕತಜ್ಞ ಕೊಡಂಗಳ ವಾಸುದೇವ ಭಟ್ , ಹಡಿಲು ಭೂಮಿ ಕೃಷಿ ಸಾಧಕ ಮುಕುಂದ ಭಟ್ ಕುಂಜಾರುಗಿರಿ , ವಿದ್ಯೋದಯ ಟ್ರಸ್ಟ್ ಅಧ್ಯಕ್ಷ ಉದ್ಯಮಿ ನಾಗರಾಜ ಬಲ್ಲಾಳ್ ,ಖಜಾಂಚಿ ಪದ್ಮರಾಜ ಆಚಾರ್ಯ , ಬೆಂಗಳೂರಿನ ಉದ್ಯಮಿ ರಾಮ್ ಪ್ರಸಾದ್ ,ಪೇಜಾವರ ಮಠದ ದಿವಾನರಾದ ಎಂ ರಘುರಾಮಾಚಾರ್ಯ , ಶ್ರೀ ಕೃಷ್ಣಬಾಲನಿಕೇತನದ ಉಪಾಧ್ಯಕ್ಷ ಪ್ರೊ ಕೆ ಕಮಲಾಕ್ಷ , ಅಖಿಲ ಭಾರತ ಮಾಧ್ವಮಹಾಂಮಡಲದ ಅಧ್ಯಕ್ಷ ಎಚ್ ವಿ ಗೌತಮ್ ಕಾರ್ಯದರ್ಶಿ ಕೆ ರಾಮಚಂದ್ರ ಉಪಾಧ್ಯಾಯ ಇವರುಗಳಿಗೆ ಶ್ರೀ ರಾಮವಿಠಲಾನುಗ್ರಹ ಪ್ರಶಸ್ತಿಯನ್ನು ಶ್ರೀಗಳು ಪ್ರದಾನಿಸಿ ಆಶೀರ್ವದಿಸಿದರು .
ಸಮ್ಮೇಳನಾಧ್ಯಕ್ಷರುಗಳಾದ ವಿದ್ವಾನ್ ಕುಂಭಾಸಿ ಸೂರ್ಯನಾರಾಯಣ ಉಪಾಧ್ಯಾಯ , ಉದ್ಯಮಿ ಕೆ ರಾಮಪ್ರಸಾದ ಭಟ್ ಚೆನ್ನೈ , ವಿದ್ವಾನ್ ಪೆರಣಂಕಿಲ ಹರಿದಾಸ ಭಟ್ಟರನ್ನೂ ಶ್ರೀಗಳು ವಿಶೇಷವಾಗಿ ಸಂಮಾನಿಸಿದರು .ಸಮ್ಮೇಳನಸ್ವಾಗತ ಸಮಿತಿ ಪ್ರ .ಕಾರ್ಯದರ್ಶಿ ವಿದ್ವಾನ್ ನಿಟ್ಟೆ ಪ್ರಸನ್ನಾಚಾರ್ಯ ರನ್ನೂ ಸತ್ಕರಿಸಲಾಯಿತು .
ಹೈಕೂರ್ಟ್ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದ , ಆರ್ ದೇವದಾಸ್ , ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ , ಶಾಸಕರಾದ ಗುರ್ಮ ಸುರೇಶ ಶೆಟ್ಟಿ , ಕಿರಣ್ ಕೊಡ್ಗಿ , ಗುರುರಾಜ ಗಂಟಿಹೊಳೆ , ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ ಸತ್ಯನಾರಾಯಣ ಆಚಾರ್ಯ , ಯಶ್ಪಾಲ್ ಎ ಸುವರ್ಣ , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , ಮಾಜಿ ಶಾಸಕರಾದ ಕೆ ರಘುಪತಿ ಭಟ್ , ಲಾಲಾಜಿ ಆರ್ ಮೆಂಡನ್ , ಶ್ರೀಕೃಷ್ಣಮಠದ ದಿವಾನರಾದ ಎಂ ನಾಗರಾಜ ಆಚಾರ್ಯ , ಸಾಮಾಜಿಕ ಧುರೀಣರಾದ ಹರಿಕೃಷ್ಣ ಪುನರೂರು , ಪ್ರೊ ವಾದಿರಾಜ್ ಗೋಪಾಡಿ , ಕೊಡಿಬೆಟ್ಟು ಗ್ರಾ ಪಂ ಅಧ್ಯಕ್ಷ ಸಂದೀಪ್ ಮಡಿವಾಳ ಶ್ರೀಪಾದ ಸಿಂಗನಮಲ್ಲಿ ಪ್ರದೀಪ ಕಲ್ಕೂರ ಮೊದಲಾದವರು ಮೂರೂ ದಿನಗಳ ಧರ್ಮಸಭೆಗಳಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದರು .
ವಿದ್ವಾನ್ ನಂದಳಿಕೆ ವಿಠಲ ಭಟ್ ,ಪೊಸ್ರಾಲು ಬಾಲಕೃಷ್ಣ ಭಟ್ , ಡಾ ಆನಂದ ತೀರ್ಥ ಉಪಾಧ್ಯಾಯ ಸಗ್ರಿ ,ವಿದ್ವಾನ್ ಕೃಷ್ಣರಾಜ ಕುತ್ಪಾಡಿ , ವಿದ್ವಾನ್ ಸಗ್ರಿ ಅನಂತ ಸಾಮಗ , ವಿ. ಶಶಾಂಕ ಭಟ್ , ಪೆರಂಪಳ್ಳಿ ವಾಸುದೇವ ಭಟ್ ಪಿ ಶ್ರೀಶ ನಾಯಕ್ , ಕೆ ವಿಷ್ಣುಮೂರ್ತಿ ಆಚಾರ್ಯ , ವಿದ್ವಾನ್ ಗೋಪಾಲ ಜೋಯಿಸ್ ಮೊದಲಾದವರು ಕಾರ್ಯಕ್ರಮಗಳ ವ್ಯವಸ್ಥೆಯಲ್ಲಿ ಸಹಕರಿಸಿದರು .