ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ರೋರ್ವರು ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಎ. 21 ರಂದು ಮುಂಜಾನೆ ನಡೆದಿದೆ.
ಕುಮಟಾ ಮೂಲದ ಪ್ರಯಾಣಿಕ ಸುಮಾರು 45 ವರ್ಷ ಪ್ರಾಯದ ಸತ್ಯ ಭಂಡಾರಿ ಮೃತಪಟ್ಟವರು. ಮೃತದೇಹವನ್ನು ಅಂಬುಲೆನ್ಸ್ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.